- Advertisement -
- Advertisement -
ಮಂಗಳೂರು ; ದೀಪಾವಳಿ ಹಬ್ಬಕ್ಕೆ ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ ಮಾಡಲಿದೆ.ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುರ್ತು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ. ಯಶವಂತಪುರ- ಮಂಗಳೂರು (06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು- ಯಶವಂತಪುರ (ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.
- Advertisement -