Monday, May 20, 2024
Homeತಾಜಾ ಸುದ್ದಿ'ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ, ನಾನಿನ್ನು ಬದುಕಲ್ಲ'- ಎನ್ನುತ್ತಲೇ ಪ್ರಾಣ ಬಿಟ್ಟಳು ಕಾಮುಕರ ಅಟ್ಟಹಾಸಕ್ಕೆ ಕೊನೆಯೆಂದು?

‘ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ, ನಾನಿನ್ನು ಬದುಕಲ್ಲ’- ಎನ್ನುತ್ತಲೇ ಪ್ರಾಣ ಬಿಟ್ಟಳು ಕಾಮುಕರ ಅಟ್ಟಹಾಸಕ್ಕೆ ಕೊನೆಯೆಂದು?

spot_img
- Advertisement -
- Advertisement -

ದೆಹಲಿ : ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ 2 ದಿನಗಳ ಹಿಂದೆ ಸಾವನ್ನಪ್ಪಿದ್ದಳು.ಈ ಪ್ರಕರಣದ ನೋವಿನ ಮಧ್ಯೆ ಆಕೆ ಸಾವನ್ನಪ್ಪಿದ ದಿನವೇ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ. ಒಂದೇ ದಿನ ಇಬ್ಬರು ದಲಿತ ಯುವತಿಯರ ಸಾವು ಸಂಭವಿಸಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದು ಸರ್ಕಾರಕ್ಕೂ ಮುಜುಗರ ತಂದಿದೆ.

ಬಲರಾಂಪುರ ಜಿಲ್ಲೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಲ್ಲಿನ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳವಾರ ಕೆಲಸಕ್ಕೆ ಹೋಗಿದ್ದ ಯುವತಿ ಸಂಜೆ ವಾಪಾಸ್ ಬರಲಿಲ್ಲ. ಆಕೆಯ ಫೋನ್​ಗೆ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ರಾತ್ರಿ ಆಟೋ ರಿಕ್ಷಾದಲ್ಲಿ ಮನೆಗೆ ಬಂದ ಯುವತಿಯ ಮೈಮೇಲೆ ಗಾಯಗಳಾಗಿತ್ತು. ಆಕೆ ನಿಲ್ಲಲೂ ಆಗದಷ್ಟು ನಿತ್ರಾಣಳಾಗಿದ್ದಳು. ಆಕೆಯ ಕೈಗೆ ಗ್ಲೂಕೋಸ್​ ಡ್ರಿಪ್ ಹಾಕಿದ್ದ ಇಂಜೆಕ್ಷನ್ ಹಾಕಲಾಗಿತ್ತು. ಆಕೆಯ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಆಕೆ ಪ್ರಾಣ ಬಿಟ್ಟಳು ಎಂದು ಯುವತಿಯ ಮನೆಯವರು ದೂರು ನೀಡಿದ್ದಾರೆ. ಯುವಕರನ್ನು ಬಂಧಿಸಲಾಗಿದೆ.

ಮೃತಳ ತಾಯಿ “ನನ್ನ ಮಗಳ ಮೇಲೆ ಅತ್ಯಾಚಾರ ನಡೆಸುವ ಮೊದಲು ಆಕೆಗೆ ಇಂಜೆಕ್ಷನ್ ಕೊಡಲಾಗಿದೆ. ಆಕೆ ಮನೆಗೆ ಬರುವಾಗ ಆಕೆಯ ಬೆನ್ನಿನ ಮೂಳೆ ಮತ್ತು ಕಾಲುಗಳು ಮುರಿದಿದ್ದವು. ಆಕೆಯ ಮೇಲೆ ಇನ್ನಿಲ್ಲದ ರೀತಿ ದೌರ್ಜನ್ಯ ನಡೆಸಿ, ಆಟೋ ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದರು. ನನ್ನ ಮಗಳು ಸಾಯುವಾಗ ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ, ನಾನಿನ್ನು ಬದುಕಲ್ಲ ಎಂದು ಹೇಳುತ್ತಲೇ ಪ್ರಾಣ ಬಿಟ್ಟಳು ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!