- Advertisement -
- Advertisement -
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ನಡೆಸಲ್ಪಡುವ 6 ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ. ಆದ್ರೆ ಇದೀಗ ಯಕ್ಷಗಾನ ಪ್ರದರ್ಶನವನ್ನು ಕಾಲ ಮಿತಿಗೊಳಪಡಿಸುವ ನಿರ್ಧಾರವನ್ನು ಕೈಬಿಡಬೇಕೆಂಬ ಆಗ್ರಹ ಕೇಳಿಬಂದಿದೆ.
ಕದ್ರಿ ದೇವಸ್ಥಾನದಲ್ಲಿ ನಡೆದ ಯಕ್ಷಗಾನ ಬಯಲಾಟ ಸೇವಾ ಸಮಿತಿ ಮತ್ತು ಹತ್ತು ಸಮಸ್ತರ ಪ್ರತಿನಿಧಿಗಳು ಹಾಗೂ ಯಕ್ಷಗಾನ ಸೇವಾರ್ಥಿಗಳ ಸಭೆಯಲ್ಲಿ ಈ ಆಗ್ರಹ ಕೇಳಿಬಂದಿದೆ. ಈ ಹಿಂದೆ ನಡೆದುಕೊಂಡು ಬಂದ ರೀತಿಯಂತೆಯೇ ಮುಂದುವರಿಯಬೇಕು, ಯಕ್ಷಗಾನವನ್ನು ರಾತ್ರಿ 10.30ರ ವರೆಗೆ ನಡೆಸುವ ಕಾಲಮಿತಿ ನಿರ್ಧಾರ ಮರು ಪರಿಶೀಲಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.
- Advertisement -