- Advertisement -
- Advertisement -
ಉಡುಪಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಅಜ್ಜರಕಾರು ಹುತಾತ್ಮ ಯೋಧರ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ವೆರೋನಿಕಾ ಕರ್ನೇಲಿಯೋ, ನರೇಂದ್ರ ಮೋದಿಯವರು ನಾರಿ ಶಕ್ತಿ ಬಗ್ಗೆ ಮಾತನಾಡ್ತಾರೆ. ಆದ್ರೆ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆಗೊಳಿಸಿ, ತನ್ನ ದ್ವಂದ್ವ ನಿಲುವು ತೋರಿಸಿದ್ದಾರೆ. ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲೇಬೇಕು ಎಂದು ಆಗ್ರಹಿಸಿದ್ರು.
- Advertisement -