Friday, June 27, 2025
Homeತಾಜಾ ಸುದ್ದಿರಾಜ್ಯದಲ್ಲಿ ಹೆಚ್ಚಾಗ್ತಿದೆ ಡೆಂಘಿ ಆರ್ಭಟ; 7 ಸಾವಿರಕ್ಕೂ ಅಧಿಕ ಕೇಸ್‌ಗಳು ಪತ್ತೆ, 7 ಮಂದಿ ಸಾವು

ರಾಜ್ಯದಲ್ಲಿ ಹೆಚ್ಚಾಗ್ತಿದೆ ಡೆಂಘಿ ಆರ್ಭಟ; 7 ಸಾವಿರಕ್ಕೂ ಅಧಿಕ ಕೇಸ್‌ಗಳು ಪತ್ತೆ, 7 ಮಂದಿ ಸಾವು

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ವರುಣ ಆರ್ಭಟಿಸುತ್ತಿದ್ದರೆ ಮತ್ತೊಂದು ಕಡೆ ಡೆಂಘಿ ಆರ್ಭಟ ಜೋರಾಗ್ತಿದೆ. ಮತ್ತೊಂದು ಕಡೆ ಡೆಂಘಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚಾಗ್ತಿದೆ.

ಇದುವರೆಗೂ ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಕೇಸ್‌ಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ  ಸಿಎಂ ಸಿದ್ದರಾಮಯ್ಯ ಮುಂಜಾಗ್ರತೆ ಕೈಗೊಳ್ಳಲು ಟಾಸ್ಕ್‌ ಪೋರ್ಸ್‌ ರಚನೆ ಮಾಡಲು ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಂಗಳವಾರ ಡಿಸಿ ಹಾಗೂ ಸಿಇಓಗಳ ಜೊತೆಗೆ ಸಭೆ ನಡೆಸಿದ ಸಿದ್ದರಾಮಯ್ಯ ಡಿಸಿ, ಸಿಇಒ ಹಾಗೂ ಡಿಹೆಚ್‌ಒ ಗಳು ಪ್ರತೀ ದಿನ ಸಮನ್ವಯದಿಂದ ಸಭೆ ನಡೆಸಿ ಡೆಂಘಿ ಹರಡದಂತೆ ಕ್ರಮ ಕೈಗೊಳ್ಳಿ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಘಿ ತಡೆಗಟ್ಟಬೇಕು ಏನು ಮಾಡಬೇಕು , ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಘಿ ಹರಡದಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದಾರೆ.

ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಘಿ ಸೋಂಕಿತರಿಗೆ ಸೂಕ್ತವಾದ ಚಿಕಿತ್ಸೆ ಒದಗಿಸಬೇಕು. ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಡೆಂಘಿ ಸೋಂಕಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಘಿ ಸೋಂಕಿತರ ಆರೋಗ್ಯದ ಮೇಲೆ ನಿಗಾ ಇಡಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಟಾಸ್ಕ್ ಫೋಸ್ ರಚಿಸಿ ಸಭೆ ನಡೆಸಬೇಕು ಮಳೆಗಾಲ ಮುಗಿಯುವ ತನಕ ಪ್ರತಿ ದಿನ ಸಭೆ ನಡೆಸಿ ಪರಿಶೀಲ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

7 ಸಾವು ಸಂಭವಿಸಿದೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!