- Advertisement -
- Advertisement -
ಮಂಗಳೂರು: ಕಾಂತಾರ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದೆ ಎಂದು ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.
ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ಈ ಸಿನಿಮಾದಲ್ಲಿ ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪ ಮಾಡಿದರು. ಹೀಗಾಗಿ ಪ್ರದರ್ಶನ ನಿಲ್ಲಿಸಲು ಒತ್ತಾಯಿಸಿದ್ರು.
- Advertisement -