- Advertisement -
- Advertisement -
ಬೆಳ್ತಂಗಡಿ; ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬದವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ರಾಜ್ ಎಂಬಾತ ವಾಟ್ಸಾಪ್ ಗ್ರೂಪ್ ಒಂದರಲ್ಲಿ ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡು ಬಂದ ಮೇರೆಗೆ ದಿನಾಂಕ: 29.08.2023 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 79/2023 ಕಲಂ:505(1)(ಬಿ),509 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಕುಟುಂಬಸ್ಥರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ ಆರೋಪದಡಿ ಪ್ರಕರಣ ಒಂದು ದಾಖಲಾಗಿದೆ.
- Advertisement -