Wednesday, May 8, 2024
Homeಕರಾವಳಿಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇನಕಾರಿ ಪೋಸ್ಟ್ ; ಸುಳ್ಯದ ಯುವಕನ ಮನೆಗೆ...

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇನಕಾರಿ ಪೋಸ್ಟ್ ; ಸುಳ್ಯದ ಯುವಕನ ಮನೆಗೆ ಬಂದು ತರಾಟೆಗೆ ತೆಗೆದುಕೊಂಡ ಶಾಸಕರ ಅಭಿಮಾನಿ ಬಳಗ

spot_img
- Advertisement -
- Advertisement -

ಸುಳ್ಯ;  ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ  ಪೋಸ್ಟ್ ಶೇರ್ ಮಾಡಿದ ಯುವಕನ ಮನೆಗೆ ಬಂದು ಶಾಸಕರ ಅಭಿಮಾನಿ ಬಳಗದವರು ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯದ ಯುವಕ ಪ್ರಮೀತ್ ಎಂಬಾತ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ  ಪೋಸ್ಟ್ ಒಂದನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದ. ಫೇಸ್ಬುಕ್ ನಲ್ಲಿ ಈ ಪೋಸ್ಟ್ ನೋಡಿದ ಅಶೋಕ್ ರೈ ಅಭಿಮಾನಿಗಳು  ಪ್ರಮೀತ್ ನನ್ನು ಕಂಡುಹಿಡಿದು ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೂಡಲೇ ಅದನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಪ್ರಮೀತ್ ಅವರು ನಾನು ಅದನ್ನು ಡಿಲೀಟ್ ಮಾಡುವುದಿಲ್ಲ ಎಂದು ಹೇಳಿರುವುದಾಗಿಯೂ ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಪ್ರಮಿತ್ ರವರು ಆ ಯುವಕರನ್ನು ಧೈರ್ಯವಿದ್ದರೆ ಸುಳ್ಯದ ಜಯನಗರಕ್ಕೆ ಬರಲು ಹೇಳಿದ್ದಾರೆಂದು,ಕರೆಯನ್ನು ಸ್ವೀಕರಿಸಿದ ಪುತ್ತೂರಿನ ಯುವಕರ ತಂಡ ಸುಮಾರು 15ಕ್ಕೂ ಹೆಚ್ಚು ಮಂದಿ ಜಯನಗರದ ಪ್ರಮೀತ್ ರವರ ಮನೆಯನ್ನು ಹುಡುಕಿ ಜಯನಗರಕ್ಕೆ ಬಂದಿದ್ದರು ಎನ್ನಲಾಗಿದೆ

ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು ಸುಳ್ಯ ಠಾಣೆಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!