- Advertisement -
- Advertisement -
ಮಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಹೇಳನಾಕಾರಿಯಾಗಿ ಮಾತನಾಡಿರೋದನ್ನ ವಿರೋಧಿಸಿ ದ.ಕ ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಸರ್ಕಿಟ್ ಹೌಸ್ ಬಳಿ ಕಟೀಲ್ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಾಯಿತು.
ಇನ್ನು ಇದೇ ವೇಳೆ ಮಾತನಾಡಿದ ಅಕ್ಷಿತ್ ಸುವರ್ಣ, ನಳಿನ್ ದೇವೇಗೌಡರ ಬಗ್ಗೆ ಅವಹೇಳನಕಾರಿಯುಆಗಿ ಮಾತನಾಡಿದ್ದು ಖಂಡನೀಯ. ಕೂಡಲೇ ಕಟೀಲ್ ಅವರು ಕ್ಷಮೆಯಾಚಿಸಬೇಕು. ಇಲ್ಲವಾದ್ರೆ ಮುಂದೆ ಕಟೀಲ್ ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲೂ ಕಪ್ಪು ಬಾವುಟ ಪ್ರದರ್ಶಿಸೋದಾಗಿ ಹೇಳಿದ್ರು.
- Advertisement -