Saturday, May 18, 2024
Homeಕರಾವಳಿಬೆಳ್ತಂಗಡಿ: ಜೈನ ಧರ್ಮದ ಆರಾಧ್ಯ ದೇವರಾದ ಗೊಮಟೇಶ್ವರ ಸ್ವಾಮಿಯ ಬಗ್ಗೆ ಅಶ್ಲೀಲ ಅವಹೇಳನಕಾರಿ ಹೇಳಿಕೆ, ದೂರು...

ಬೆಳ್ತಂಗಡಿ: ಜೈನ ಧರ್ಮದ ಆರಾಧ್ಯ ದೇವರಾದ ಗೊಮಟೇಶ್ವರ ಸ್ವಾಮಿಯ ಬಗ್ಗೆ ಅಶ್ಲೀಲ ಅವಹೇಳನಕಾರಿ ಹೇಳಿಕೆ, ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ: ಆಯುಬ್ ಖನ್ ಎಂಬುವವರು ಜೈನ ಧರ್ಮದ ಆರಾಧ್ಯ ದೇವರಾದ ಗೊಮಟೇಶ್ವರ ಸ್ವಾಮಿಯ ಬಗ್ಗೆ ಅಶ್ಲೀಲ , ಅವಹೇಳನಕಾರಿಯಾಗಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದು ಜೈನ ಧರ್ಮದ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗಿದೆ.

ಫೆಬ್ರವರಿ 8ರಂದು ಅಯೂಬ್ ಖಾನ್ ದುರುದ್ದೇಶ‌ಪೂರಕವಾಗಿ ಹೇಳಿಕೆ ನೀಡುವ ಮೂಲಕ ಜೈನ ಸಮಾಜದ ಭಾವನೆಗಳಿಗೆ ನೋವು ಮಾಡಿದ್ದಾರೆ ಹಾಗೂ ಧರ್ಮ-ಧರ್ಮಗಳ ನಡುವೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಸಮಾಜದ ಸ್ವಾಸ್ಥ್ಯ ಕದಡುವ ಹೇಳಿಕೆ ನೀಡಿದ್ದಾರೆ. ಅಯೂಬ್ ಖಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಮತಿ ವಿಕಲ್ಪರಿಗೆ ಇದೊಂದು ಪಾಠವಾಗಬೇಕಿದೆ.

ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಶ್ರೀ ಬಾಹುಬಲಿ ಸ್ವಾಮಿ ಸೇವಾ ಸಮಿತಿಯ ವತಿಯಿಂದ ದೂರು. ನೀಡಲಾಗಿದೆ. ಈ ಸಂದರ್ಭದಲ್ಲಿ ಮಹಾವೀರ ಅಜ್ರಿ , ಉದಯ ಜೈನ್, ಪದ್ಮಪ್ರಸಾದ್, ಮಲ್ಲಿನಾಥ ಜೈನ್, ಹರ್ಷಿತ್ ಜೈನ್, ರಾಜೇಂದ್ರ ಶೆಟ್ಟಿ, ಅಕ್ಷಯ್ ಜೈನ್, ಮಲ್ಲಿಕ್ ಜೈನ್, ನಾಗರಾಜ್ ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!