- Advertisement -
- Advertisement -
ಬೆಳ್ತಂಗಡಿ : ಮಾಜಿ ಪ್ರಧಾನಮಂತ್ರಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜ.25 ರಂದು ರಾತ್ರಿ ಹಾಸನದಿಂದ ಕಾರಿನ ಮೂಲಕ ದಂಪತಿ ಆಗಮಿಸಿದ್ದು.ಈ ವೇಳೆ ಧರ್ಮಸ್ಥಳದ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಹೂ ಹಾರ ಹಾಕಿ ಸ್ವಾಗತಿಸಿದರು. ಸನ್ನಿಧಿ ವಸತಿ ಗೃಹದಲ್ಲಿದ್ದು. ಜ.26 ರಂದು ಬೆಳಗ್ಗೆ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದು.ಈ ವೇಳೆ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಲ್ಲಿಂದ ಸನ್ನಿಧಿ ವಸತಿ ಗೃಹದಲ್ಲಿ ವಿಶ್ರಾಂತಿ ಪಡೆದು. ಮಧ್ಯಾಹ್ನ ನೇರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
- Advertisement -