Friday, May 3, 2024
Homeಕರಾವಳಿಸರಪಾಡಿ: ಮತದಾರರು, ಕಾರ್ಯಕರ್ತರ ಸಹಕಾರದಿಂದ ಬಂಟ್ವಾಳದಲ್ಲಿ ಅಭೂತಪೂರ್ವ ಅಭಿವೃದ್ಧಿ ಸಾಧನೆ: ಶಾಸಕ ರಾಜೇಶ್ ನಾಯ್ಕ್

ಸರಪಾಡಿ: ಮತದಾರರು, ಕಾರ್ಯಕರ್ತರ ಸಹಕಾರದಿಂದ ಬಂಟ್ವಾಳದಲ್ಲಿ ಅಭೂತಪೂರ್ವ ಅಭಿವೃದ್ಧಿ ಸಾಧನೆ: ಶಾಸಕ ರಾಜೇಶ್ ನಾಯ್ಕ್

spot_img
- Advertisement -
- Advertisement -

ಸರಪಾಡಿ: ದೇವರ ಆಶೀರ್ವಾದ ಮತದಾರರು, ಕಾರ್ಯಕರ್ತರು  ನೀಡಿದ ಸಹಕಾರದಿಂದ ಬಂಟ್ವಾಳದಲ್ಲಿ ಅಭೂತಪೂರ್ವ ಅಭಿವೃದ್ಧಿ ಸಾಧಿಸಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಸರಪಾಡಿ ಶಕ್ತಿ ಕೇಂದ್ರದಲ್ಲಿ ನಡೆದ  ಪ್ರಥಮ ಬಿಜೆಪಿ  ಪ್ರಮುಖ ಕಾರ್ಯಕರ್ತರ ಚುನಾವಣಾ ಸಭೆಯಲ್ಲಿ ಮಾತನಾಡಿದರು. ಮುಂದಿನ ಅವಧಿಯಲ್ಲಿ ಪಕ್ಷದ ಹಿರಿಯರ ಸೂಚನೆಯಂತೆ, ಕಾರ್ಯಕರ್ತರ ಹಾಗೂ ಮತದಾರರ ಇಚ್ಛೆಯಂತೆ  ದಾಖಲೆಯ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ತಿಳಿಸಿದರು.

ಮತದಾರರು ನೀಡಿದ ಪ್ರತಿಯೊಂದು ಮತಕ್ಕೆ ಯಾವುದೇ ಚ್ಯುತಿ ಬಾರದಂತೆ ಕಳೆದ ಐದು ವರ್ಷ ಪೂರೈಸಿದ್ದೇನೆ. ಅಭಿವೃದ್ಧಿ ಜೊತೆಗೆ ಶಾಂತಿಯ ಬಂಟ್ವಾಳವಾಗಿ ಮಾಡಲು ಅವಕಾಶ ನೀಡಿದ ತಾಲೂಕಿನ ಪ್ರತಿಯೊಬ್ಬರಿಗೂ ಧನ್ಯವಾದ ನೀಡುತ್ತಾ, ಮುಂದಿನ ಅವಧಿಯಲ್ಲಿ ಮತ್ತೆ ಶಾಂತಿಯ ಬಂಟ್ವಾಳವಾಗಿ ಉಳಿಯಲು ಬಿಜೆಪಿ ಅಧಿಕಾರಕ್ಕೆ ಬರಬೇಕು, ಅದಕ್ಕಾಗಿ ಕಾರ್ಯಕರ್ತರು ಜತೆಯಾಗಿ ಕೆಲಸ ಮಾಡಿ ಎಂದು ಎಂದು ಅವರು ತಿಳಿಸಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ  ಅವರು ಮಾತನಾಡಿ ಕಳೆದ ಐದು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರತಿ ಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು. ಶಾಸಕ ರಾಜೇಶ್ ನಾಯ್ಕ್ ಅವರ ವ್ಯಕ್ತಿತ್ವವನ್ನು ಹಾಗೂ ಮಾನವೀಯ ಗುಣಗಳ ಬಗ್ಗೆ ಮತದಾರರಿಗೆ ತಿಳಿಸುವ ಅಗತ್ಯವಿದೆ.

ಗೊಂದಲದ ಗೂಡಾಗಿದ್ದ ಬಂಟ್ವಾಳವನ್ನು ಶಾಂತಿಯುತ ನವಬಂಟ್ವಾಳವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ ಜಾತ್ಯಾತೀತ ಶಾಸಕ ರಾಜೇಶ್ ನಾಯ್ಕ್ ಅವರನ್ನು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಮಾಡುವಲ್ಲಿ ಕಾರ್ಯಕರ್ತರು ಚುನಾವಣಾ ದಿನದವರೆಗೂ ವಿರಮಿಸದೆ ಕೆಲಸ ಮಾಡುವಂತೆ ಮನವಿ ಮಾಡಿದರು. ಕಳೆದ ಬಾರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಂತರದಲ್ಲಿ ಗೆಲುವು ಸಾಧಿಸಿದಲು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ವಿನಂತಿ ಮಾಡಿದರು. ಬೋಗಸ್ ಗ್ಯಾರಂಟಿ ಕಾರ್ಡ್ ನ್ನು ಕಾಂಗ್ರೆಸ್ ಮನೆಮನೆಗೆ ಹಂಚುತ್ತಿದೆ,   ಸುಳ್ಳು ಅಪಪ್ರಚಾರಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಸರಪಾಡಿ ಶಕ್ತಿ ಕೇಂದ್ರದ ಪ್ರಮುಖ್ ದಯಾನಂದ ಶೆಟ್ಟಿ, ಮುನ್ನಲಾಯಿ, ಸರಪಾಡಿ ಶಕ್ತಿ ಕೇಂದ್ರದ  ಪ್ರಭಾರಿ ಸುರೇಶ್ ಕುಲಾಲ್, ಸರಪಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ  ಲೀಲಾವತಿ ಧರ್ಣಪ್ಪ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!