- Advertisement -
![]()
- Advertisement -
ಸುಬ್ರಹ್ಮಣ್ಯ; ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಶೀಘ್ರದಲ್ಲಿ ಭಕ್ತರಿಗೆ ಬೆಳಗಿನ ಉಪಾಹಾರ ನೀಡುವ ಬಗ್ಗೆ ದೇಗುಲದ ನೂತನ ವ್ಯವಸ್ಥಾಪನ ಸಮಿತಿ ಯೋಜನೆ ರೂಪಿಸಿದೆ ಎನ್ನಲಾಗಿದೆ.
ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಶೀಘ್ರ ಭಕ್ತರಿಗೆ ಬೆಳಗ್ಗಿನ ಹೊತ್ತು ಉಪಾಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಮೆನು, ಸಮಯದ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ವ್ಯವಸ್ಥಾಪನ ಸಮಿತಿ ಕೈಗೊಳ್ಳಲಿದ್ದು, ಬಳಿಕ ಈ ಹೊಸ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎನ್ನಲಾಗುತ್ತಿದೆ.
ಕ್ಷೇತ್ರದಲ್ಲಿ ಈಗಾಗಲೇ ಮಧ್ಯಾಹ್ನ ಹಾಗೂ ರಾತ್ರಿಯ ಭೋಜನ ಪ್ರಸಾದ ವಿತರಿಸಲಾಗುತ್ತಿದೆ. ದಿನಂಪ್ರತಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ. ಬೆಳಗಿನ ಉಪಾಹಾರ ಯೋಜನೆಯಿಂದ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ.
- Advertisement -


