Sunday, May 19, 2024
HomeUncategorizedಬೆಳ್ತಂಗಡಿ:ದೇವರಾಜು ಅರಸು ಅಭಿವೃದ್ಧಿ ನಿಗಮ ಮುಲ್ಕಿಯ ಪ್ರಥಮ ದರ್ಜೆ ಸಹಾಯಕರಾಗಿ ಜಯಶ್ರೀ ಪಿಲಿಕಲ ನೇಮಕ!!

ಬೆಳ್ತಂಗಡಿ:ದೇವರಾಜು ಅರಸು ಅಭಿವೃದ್ಧಿ ನಿಗಮ ಮುಲ್ಕಿಯ ಪ್ರಥಮ ದರ್ಜೆ ಸಹಾಯಕರಾಗಿ ಜಯಶ್ರೀ ಪಿಲಿಕಲ ನೇಮಕ!!

spot_img
- Advertisement -
- Advertisement -

ಬೆಳ್ತಂಗಡಿ: ದೇವರಾಜು ಅರಸು ಅಭಿವೃದ್ಧಿ ನಿಗಮ ಮುಲ್ಕಿ ಇಲ್ಲಿನ ಪ್ರಥಮ ದರ್ಜೆ ಸಹಾಯಕರಾಗಿ ಸವಣಾಲು ಗ್ರಾಮದ ಪಿಲಿಕಲ ಎಂಬಲ್ಲಿನ ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ರವರು ನಿಯುಕ್ತರಾಗಿದ್ದಾರೆ.

ಇವರು ನೆರಿಯ ಆಲಂಗಾಯಿ ಆಶ್ರಮ ಶಾಲೆಯಲ್ಲಿ ಪ್ರಾಥಮಿಕ , ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ಇಲ್ಲಿ ಪ್ರೌಢ ಶಿಕ್ಷಣ ಮುಗಿಸಿ , ಪಿಯುಸಿಯನ್ನು ಬೆಳ್ತಂಗಡಿಯ ಗುರುದೇವ ಕಾಲೇಜಿನಲ್ಲಿ , ಪದವಿ ಶಿಕ್ಷಣವನ್ನು ಎಸ್.ಡಿ.ಎಂ ಕಾಲೇಜಿನಲ್ಲಿ , ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರುತ್ತಾರೆ.

ಇವರು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಪಿಲಿಕಲ ಮಹಾಬಲ ಮಲೆಕುಡಿಯ ಎಂಬವರ ಮಗಳಾಗಿದ್ದು , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯ , ದ.ಕ ಜಿಲ್ಲಾ ಸಹಸಂಚಾಲಕ , ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲರವರ ಸಹೋದರಿಯಾಗಿದ್ದಾರೆ.

- Advertisement -
spot_img

Latest News

error: Content is protected !!