ಬೆಳ್ತಂಗಡಿಯ ಎಸ್ಐಟಿ ಕಚೇರಿ ಎಸ್ಐಟಿ ಪೊಲೀಸ್ ಠಾಣೆಯಾಗಿ ಬದಲಾಯಿಸಲು ಡಿಜಿ, ಐಜಿಪಿ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ. ಇನ್ಮುಂದೆ ಶವ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದೂರುಗಳಿದ್ದರು ಬೆಳ್ತಂಗಡಿ ಎಸ್ಐಟಿ ಪೊಲೀಸ್ ಠಾಣೆಯಲ್ಲಿಯೇ ದಾಖಲು ಮಾಡಲು ಅವಕಾಶ ನೀಡುವ ಉದ್ದೇಶದಿಂದ ಹೀಗೆ ಬದಲಾವಣೆ ಮಾಡಲಾಗಿದೆ.
ಇತ್ತ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿರುವ ಮಧ್ಯೆಯೇ ಕಡಬದ ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಇದೀಗ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ತಾನು ಯುವತಿ ಶವ ನೋಡಿರುವುದಾಗಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆ ಜಯಂತ್ ಟಿ. ಅವರನ್ನು ಕಚೇರಿಗೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುವ ಸಾಧ್ಯತೆಯಿದೆ. ಜಯಂತ್ ಟಿ. ಅವರು ಎಸ್.ಐ.ಟಿ ಬೆಳ್ತಂಗಡಿ ಸಲಹೆಯಂತೆ 04.08.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


