- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಹತ್ಯೆ ಹಿನ್ನಲೆ, ದಕ್ಷಿಣಕನ್ನಡ ಜಿಲ್ಲೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆ ಜಿಲ್ಲೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ ನೆಟ್ಟಾರ್ ಹತ್ಯೆ, ಫಾಸಿಲ್ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಡಿ ಜಿ ಮಾಹಿತಿ ಪಡೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ್ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಸರ್ಕ್ಯೂಟ್ ಹೌಸ್ ನಲ್ಲಿ ಉಪಹಾರ ಮುಗಿಸಿ ಕಮೀಷನರ್ ಕಚೇರಿ ಹಾಗೂ ಎಸ್ ಪಿ ಕಚೇರಿಗೆ ಭೇಟಿ ಡಿಜಿಪಿ ಭೇಟಿ ನೀಡಲಿದ್ದಾರೆ. ಸದ್ಯ ಮಹಾ ನಿರ್ದೇಶಕರಿಗೆ ಪಶ್ಚಿಮ ವಲಯ ಐಜಿಪಿ,ಕಮೀಷನರ್ ,ಎಸ್ ಪಿ ವರದಿ ನೀಡುತ್ತಿದ್ದಾರೆ.
- Advertisement -