- Advertisement -
- Advertisement -
ಬೆಳ್ತಂಗಡಿ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ(57)ಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಇಂದು ಬೆಳಿಗ್ಗೆ 7.30 ರ ವೇಳೆ ಕಛೇರಿಗೆ ಬಂದವರು ತಮ್ಮ ಹಾಜರಿಯನ್ನು ನಮೂದಿಸಿದ್ದರು. ಇಂದು ಮದ್ಯಾಹ್ನ ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ನಿನ್ನೆ ರವೀಂದ್ರ .ಡಿ ರವರ ಮನೆ ಇರುವ ಧರ್ಮಸ್ಥಳದ ಬೊಳಿಯಾರು ಪ್ರದೇಶವನ್ನು ಕೊರೊನಾ ಕಂಟೈನ್ಮೆಂಟ್ ಪ್ರದೇಶವೆಂದು ಘೊಷಿಸಲಾಗಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
- Advertisement -