ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ-2 ಮತ್ತು ಹೆಡ್ ಕಾನ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು ಇಂದು ಇಬ್ಬರಿಗೂ ಬೀಳ್ಕೋಡುಗೆ ಮಾಡಲಾಗಿದೆ.
ಪಿಎಸ್ಐ-2 ಚಂದ್ರಶೇಖರ್ ವರ್ಗಾವಣೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ-2 ಆಗಿದ್ದ ಚಂದ್ರಶೇಖರ್ ಅವರನ್ನು ಮಂಗಳೂರು ಅರಣ್ಯ ಸಂಚಾರಿ ದಳ (FMS) ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಪಿಎಸ್ಐ ಚಂದ್ರಶೇಖರ್ ಅವರು ಕಳೆದ ಎರಡು ವರ್ಷ ಮೂರು ತಿಂಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಹೆಡ್ ಕಾನ್ಟೇಬಲ್ ವಿಶ್ವನಾಥ್ ನಾಯ್ಕ್ ವರ್ಗಾವಣೆ:
ಕಳೆದ ಆರು ವರ್ಷ ಎರಡು ತಿಂಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಟೇಬಲ್ ವಿಶ್ವನಾಥ್ ನಾಯ್ಕ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ವಿಶ್ವನಾಥ್ ನಾಯ್ಕ್ ಅವರು ಮಂಗಳೂರು ಸಂಚಾರ ಪೊಲೀಸ್ ಠಾಣೆ, ಬೆಳ್ತಂಗಡಿ , ವೇಣೂರು ಮುಂತಾದ ಕಡೆ ಉತ್ತಮವಾಗಿ ಸೇವೆ ಸಲ್ಲಿಸಿದ್ದರು.
ಪಿಎಸ್ಐ ಚಂದ್ರಶೇಖರ್ ಮತ್ತು ಹೆಡ್ ಕಾನ್ಟೇಬಲ್ ವಿಶ್ವನಾಥ್ ನಾಯ್ಕ್ ಅವರಿಗೆ ಇಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ-1 ಕೃಷ್ಣಕಾಂತ್ ಪಾಟೀಲ್ ಮತ್ತು ಸಿಬ್ಬಂದಿ ಸೇರಿಕೊಂಡು ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿಸಿದರು.