- Advertisement -
- Advertisement -
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದಲ್ಲಿ 10 ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಆರಂಭಿಸುತ್ತಿದೆ. ಹಾಗೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 768 ಸೇವೆಗಳನ್ನು ಜನರಿಗೆ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಈ ನಿಟ್ಟಿನಲ್ಲಿ ಹೊನ್ನಾವರ ಯೋಜನಾ ಕಚೇರಿಯಲ್ಲಿ ಇಂದು ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಯೋಜನಾ ನಿರ್ದೇಶಕ ಶಂಕರ ಶೆಟ್ಟಿ , ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಉಪಸ್ಥಿತರಿದ್ದರು . ಸರ್ಕಾರದ ಯೋಜನೆ ಜನರಿಗೆ ತಲುಪುವಲ್ಲಿ ಧರ್ಮಸ್ಥಳದ ಪಾತ್ರ ಮಹತ್ವದ್ದಾಗಿದೆ . ಪೂಜ್ಯ ಹೆಗ್ಗಡೆಯವರನ್ನು , ಧರ್ಮಸ್ಥಳ ಯೋಜನೆಯ ಕಾರ್ಯಕರ್ತರನ್ನು ಅಭಿನಂದಿಸಿದೆ .
- Advertisement -