- Advertisement -
- Advertisement -
ಉಡುಪಿ: ಮೊನ್ನೆ ಶನಿವಾರ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಂಸಾಹಾರವನ್ನು ತಿಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಶಾಸಕರು ಮತ್ತು ಬಿಜೆಪಿ ನಾಯಕರು ಕೂಡ ಗೋವಾ ಸಿಎಂ ಜೊತೆಗಿದ್ದರು ಎಂಬ ಆರೋಪವೊಂದು ಕೇಳಿ ಬಂದಿದೆ.
ಈ ಬಗ್ಗೆ ಉಡುಪಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಗಂಭೀರ ಆರೋಪ ಮಾಡಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಹಾರ ಸ್ವೀಕರಿಸಿ ದೇವಸ್ಥಾನಕ್ಕೆ ಹೋಗಿದ್ದರು. ಬಿಜೆಪಿ ಈ ವಿಚಾರದಲ್ಲಿ ರಾಜ್ಯಾದ್ಯಂತ ರಾದ್ಧಾಂತ ಮಾಡಿತ್ತು . ನಿಮ್ಮ ನಾಯಕರು ಮಾಂಸಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗಬಹುದೇ? ಈ ಬಗ್ಗೆ ರಾಜ್ಯ ಬಿಜೆಪಿ ಜಿಲ್ಲೆ ಬಿಜೆಪಿಯ ನಾಯಕರುಗಳು ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
- Advertisement -