- Advertisement -
![]()
- Advertisement -
ಬೆಂಗಳೂರು : ಲಾಕ್ಡೌನ್ ಹೊತ್ತಿನಲ್ಲಿ ಸ್ಯಾಂಡಲ್ವುಡ್ ನಿರ್ದೇಶಕ ಎ.ಪಿ ಅರ್ಜುನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅರ್ಜುನ್ ಹಾಸನ ಮೂಲದ ಬಿ.ಆರ್.ಅನ್ನಪೂರ್ಣ ಜೊತೆ ಸರಳವಾಗಿ ಮದುವೆಯಾಗಿದ್ದಾರೆ. ರಾಮಸಂದ್ರದ ಮಹಾಲಕ್ಷ್ಮಿ ಎನ್ಕ್ಲೇವ್ ನಲ್ಲಿ ಅರ್ಜುನ್ ಮತ್ತು ಅನ್ನಪೂರ್ಣ ಸಪ್ತಪದಿ ತುಳಿದ್ದಾರೆ.
ಮದುವೆಗೆ ನಟ ಧ್ರುವ ಸರ್ಜಾ ಮತ್ತು ಕಿಸ್ ಸಿನಿಮಾ ಖ್ಯಾತಿಯ ವಿರಾಟ್ ಸೇರಿದಂತೆ ಕೆಲ ಕಲಾವಿದರು ಮಾತ್ರ ಭಾಗಿಯಾಗಿದ್ದು, ನವ ಜೋಡಿಗೆ ಶುಭಾ ಹಾರೈಸಿದ್ದಾರೆ.ನಿರ್ದೇಶಕ ಎ.ಪಿ.ಅರ್ಜುನ್ ‘ತಂಗಿಗಾಗಿ’ ಸಿನಿಮಾದಲ್ಲಿ ಗೀತರಚನೆಕಾರನಾಗಿ ಚಿತ್ರರಂಗಕ್ಕೆ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅರ್ಜುನ್ ಅವರು ‘ಅಂಬಾರಿ’, ‘ಅದ್ಧೂರಿ’, ‘ಐರಾವತ’, ಮತ್ತು ‘ರಾಟೆ’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.



- Advertisement -


