- Advertisement -
- Advertisement -
ಬೆಳ್ತಂಗಡಿ: ಜಮೀನು ಮಂಜೂರಾತಿಗಾಗಿ ಯಾರಾದ್ರೂ ನಿಮ್ಮಿಂದ ಲಂಚ ಪಡೆದ್ರೆ ಅವರ ಮಾಹಿತಿ ನೀಡಿ. ನಿಮಗೆ ಹಣ ಮರಳಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ನ.14 ರಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಯೋಜನೆಗಳು ಜನರಿಗೆ ಪಾರದರ್ಶಕವಾಗಿ ಸಿಗಬೇಕು ಎಂಬ ಕಲ್ಪನೆಯಿಂದ ಜನರ ಬಳಿ ಆಡಳಿತ ಸೇವೆ ಎಂಬ ಹೊಸ ಕಲ್ಪನೆಯಂತೆ ತಾಲೂಕಿನಲ್ಲಿ ಅನುಷ್ಠಾನ ಮಾಡುತ್ತಿದ್ದು ಇದರ ಪ್ರಾರಂಭಿಕವಾಗಿ ರಾಜ್ಯದಲ್ಲೇ ಪ್ರಪ್ರಥಮಬಾರಿಗೆ ಅಕ್ರಮ ಸಕ್ರಮ ಅರ್ಜಿ ವಿಲೇವಾರಿಯನ್ನು ಗ್ರಾಮ ಪಂಚಾಯತ್ ಮಟ್ಟದಲ್ಲೇ ಮಾಡಲು ಉದ್ದೇಶಿಸಿದೆ. ನ. ೨೨ರಂದು ಇದಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಅಕ್ರಮ ಸಕ್ರಮ ವಿಲೇವಾರಿ ದಿನಾಂಕ ವಿವರ ಹೀಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ಸಕ್ರಮ ಸಮಿತಿಯ ಜಯಂತ ಕೋಟ್ಯಾನ್ ಉಪಸ್ಥಿತರಿದ್ದರು.
- Advertisement -