Friday, March 29, 2024
Homeತಾಜಾ ಸುದ್ದಿರಾಜ್ಯದಲ್ಲಿ 3.58 ಲಕ್ಷ ಅಕ್ರಮ ಪಿಂಚಣಿದಾರರ ಪತ್ತೆ: ಕಂದಾಯ ಸಚಿವ ಆರ್.ಅಶೋಕ ಹೇಳಿಕೆ

ರಾಜ್ಯದಲ್ಲಿ 3.58 ಲಕ್ಷ ಅಕ್ರಮ ಪಿಂಚಣಿದಾರರ ಪತ್ತೆ: ಕಂದಾಯ ಸಚಿವ ಆರ್.ಅಶೋಕ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.


ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರವು ಒಂಬತ್ತು ಮಾಸಿಕ ಪಿಂಚಣಿಗಳನ್ನು ನೀಡುತ್ತಿದೆ. ಅರ್ಹತೆ ಇಲ್ಲದೇ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದವರನ್ನು ಗುರುತಿಸಿ, ಸೌಲಭ್ಯ ರದ್ದು ಮಾಡಲಾಗಿದೆ’ ಎಂದರು.


ಶ್ರೀಮಂತರು, ಉದ್ಯೋಗಿಗಳು ಅಕ್ರಮವಾಗಿ ಸಾಮಾಜಿಕ ಪಿಂಚಣಿ ಪಡೆಯುತ್ತಿದ್ದರು. ಮೃತಪಟ್ಟವರ ಹೆಸರಿನಲ್ಲಿ ಹಲವು ವರ್ಷಗಳಿಂದ ಪಿಂಚಣಿ ಪಾವತಿ ಆಗುತ್ತಿರುವುದು ಪತ್ತೆಯಾಗಿದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!