- Advertisement -
- Advertisement -
ಮಲ್ಪೆ: ಅಕ್ರಮ ಮೀನು ಮಾರುಕಟ್ಟೆ ಶೆಡ್ ತೆರವು ಕಾರ್ಯಾಚರಣೆ ವೇಳೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಅರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕಿನ್ನಿಮೂಲ್ಕಿ ಎಂಬಲ್ಲಿ ಅನಧಿಕೃತ ಮೀನು ಮಾರುಕಟ್ಟೆ ಶೆಡ್ ತೆರವು ವೇಳೆ ಅಡ್ಡಿ ಉಂಟು ಮಾಡಿದ್ದಕ್ಕೆ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಹಾಗೂ ಇತರರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಸಹಾಯದಿಂದಲೇ ಸರ್ಕಾರಿ ಅಧಿಕಾರಿಗಳು ತೆರವು ಕಾರ್ಯಚರಣೆ ಮುಗಿಸಿದ್ದಾರೆ..
- Advertisement -