Saturday, April 27, 2024
Homeಕರಾವಳಿಸುರತ್ಕಲ್: ಕೊರೊನಾ ವೈರಸ್ ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಪರಿಹಾರ ಧನ ವಿತರಣೆ

ಸುರತ್ಕಲ್: ಕೊರೊನಾ ವೈರಸ್ ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಪರಿಹಾರ ಧನ ವಿತರಣೆ

spot_img
- Advertisement -
- Advertisement -

ಸುರತ್ಕಲ್: ಕೊರೊನಾ ವೈರಸ್ ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದ ಪರಿಹಾರ ಧನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ . ಭರತ್ ಶೆಟ್ಟಿ ವೈ ಅವರು ಸೋಮವಾರ ವಿತರಿಸಿದರು.

ಸುರತ್ಕಲ್ ಹಾಗೂ ಕಾವೂರು ಕಚೇರಿಯಲ್ಲಿ ಒಟ್ಟು 16 ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಲಾಯಿತು . ಈ ಸಂದರ್ಭ ಮಾತನಾಡಿದ ಶಾಸಕರು ಬಿಪಿಎಲ್ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ಹಾಗೂ ರಾಜ್ಯ ಸರಕಾರ ಒಂದು ಲಕ್ಷ ರೂಪಾಯಿಯನ್ನು ನೀಡುತ್ತಿದೆ .

ಎಪಿಎಲ್ ಸಂತ್ರಸ್ತ ಕುಟುಂಬದ ಸದಸ್ಯರಿಗೆ ರಾಜ್ಯ ಸರಕಾರ ತಲಾ ಐವತ್ತು ಸಾವಿರ ರೂಪಾಯಿ ನೀಡುತ್ತಿದೆ. ನನ್ನ ಕ್ಷೇತ್ರದ ಕಂದಾಯ ಅಧಿಕಾರಿಗಳಿಂದ ಸಂತ್ರಸ್ತ ಕುಟುಂಬಗಳನ್ನು ಗುರುತಿಸಿ ಅವರಿಗೆ ಪರಿಹಾರ ದೊರಕಿಸುವ ಕಾರ್ಯಕ್ರಮ ನಡೆಯುತ್ತಿದೆ ಎಂದರು .

ಈ ಸಂದರ್ಭ ಬಿಜೆಪಿ ಮುಖಂಡರಾದ ವಿಠಲ್ ಸಾಲಿಯಾನ್ , ಉಪತಹಶಿಲ್ದಾರ್ ನವೀನ್ , ಕಂದಾಯ ಅಧಿಕಾರಿ ರವಿಪ್ರಸಾದ್ ಮಲ್ಯ ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!