Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥಗೊಂಡು ಮಹಿಳೆ ಸಾವನ್ನಪ್ಪಿದ ಪ್ರಕರಣ;...

ಬೆಳ್ತಂಗಡಿ : ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥಗೊಂಡು ಮಹಿಳೆ ಸಾವನ್ನಪ್ಪಿದ ಪ್ರಕರಣ; ಬಂದಾರು ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ,  ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ : ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದವರ ಪೈಕಿ ಕೆಲವರು ಚೇತರಿಸಿಕೊಳ್ಳುತ್ತಿದ್ದರೆ ಇನ್ನೊಂದೆಡೆ ಅಸ್ವಸ್ಥರಾಗುವವರ ಸಂಖ್ಯೆ ಏರುತ್ತಲೇ ಇದೆ, ಆತಂಕಕಾರಿ ಸಂಗತಿ ಎಂದರೆ ಆರತಕ್ಷತೆ ಮನೆಗೆ ಹೋಗದವರೂ ವೆಜ್ ಊಟ ಮಾಡಿದವರೂ ಮಾತ್ರ ಅಸ್ವಸ್ಥರಾಗಿ ಆಸ್ಪತ್ರೆ ಸೇರಿ ಗಂಭೀರ ಸ್ಥಿತಿಯಲ್ಲಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ , ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಮತ್ತಿತರ ಅಧಿಕಾರಿಗಳ ತಂಡ ಮೇ.17 ರಂದು ಬಂದಾರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಬಗ್ಗೆ ನಿಗಾ ಇಡುವುದರ ಜೊತೆಗೆ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಬೇಕು ಎಂದು ವೈದ್ಯರಿಗೆ ಸೂಚನೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ  ಕೊಪ್ಪದಡ್ಕ ಸಮೀಪದ ಪಿಲತ್ತಿಮಾರು ನಿವಾಸಿ ಗಂಗಯ್ಯ ಗೌಡ ಎಂಬವರ ಪುತ್ರಿಯ ಮದುವೆಯ ಮರುದಿನ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭೋಜನ ಸೇವಿಸಿದ ಬೆನ್ನಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ಐವತ್ತಕ್ಕೂ ಅಧಿಕ ಮಂದಿ  ವಾಂತಿ ಭೇದಿ ಮತ್ತಿತರ ರೀತಿಯಲ್ಲಿ ಅಸ್ವಸ್ಥರಾಗಿ ಮಂಗಳೂರು ವೆನ್ಲಾಕ್ ಸೇರಿದಂತೆ ಉಜಿರೆ, ಉಪ್ಪಿನಂಗಡಿಯ ವಿವಿಧ  ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಕೆಲವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಇನ್ನೊಂದೆಡೆ ಅಸ್ವಸ್ಥರ ಸಂಖ್ಯೆ ಏರುತ್ತಲೇ ಇದ್ದು ಆರಕ್ಷತೆ ಮನೆಯಲ್ಲಿ ಊಟ ಸೇವಿಸಿದವರ ಆತಂಕಕ್ಕೆ ಕಾರಣವಾಗಿದೆ. ಆರತಕ್ಷತೆ ಮನೆಯ ಭೋಜನ ಸೇವಿಸಿದ ಮದುಮಗ ಸೇರಿದಂತೆ ಸುಮಾರು 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು ಈ ಪೈಕಿ ವೆನ್ಲಾಕ್ ಆಸ್ಪತ್ರೆಯಲ್ಲಿ  ಗಂಭೀರ ಸ್ಥಿತಿಯಲ್ಲಿದ್ದ  ಸ್ಥಳೀಯ ಕಮಲಾ ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಮೇ.16 ರಂದು ಮೃತಪಟ್ಟಿದ್ದರು.ಸುಮಾರು 10ಕ್ಕೂ ಹೆಚ್ಚು  ಮಂದಿ ಗಂಭೀರ ಸ್ಥಿತಿಯಲ್ಲಿದ್ದು  ಐಸಿಯೂ ಚಿಕಿತ್ಸೆ ಪಡೆಯುತ್ತಿದ್ದು ಈ ಸಮಸ್ಯೆಯು ಸಾಂಕ್ರಾಮಿಕವಾಗಿ  ಪರಿಣಮಿಸಿ ಹ‌‌‌ರಡಿಕೊಳ್ಳುತ್ತಿದೆಯೇ  ಎಂಬ ಆತಂಕ ಮೂಡಲು ಕಾರಣವಾಗಿದೆ. ಮೇ 11ನೇ ಭಾನುವಾರ ನಡೆದ  ಮದುವೆಯ  ಆರತಕ್ಷತೆಯು ಮೇ12 ಸೋಮವಾರ ವಧುವಿನ ಮನೆಯಲ್ಲಿ ನಡೆದಿತ್ತು.

ಡಿಹೆಚ್ ಒ ,ಟಿಹೆಚ್ ಒ. ತಂಡ ಭೇಟಿ ; ಬಂದಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವರ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಶನಿವಾರ ಬಂದಾರು ಗ್ರಾಮಕ್ಕೆ ಭೇಟಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಮುಂತಾದವರ  ತಂಡ ಮಾಹಿತಿ ಸಂಗ್ರಹಿಸಿದೆ. ಗ್ರಾ.ಪಂ. ಅಂಬೇಡ್ಕರ್ ಭವನದಲ್ಲಿ ಸಭೆ ನಡೆಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್. ಆರ್. ತಿಮ್ಮಯ್ಯ ಅವರು ಮಾತನಾಡಿ ಮಚ್ಚಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಕಣಿಯೂರು ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ತಂಡಗಳು ಬಂದಾರು  ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಘಟನೆಯಲ್ಲಿ  ಅಸ್ವಸ್ಥಗೊಂಡವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿ ವಿವರ ಸಂಗ್ರಹಿಸುವಂತೆ ಸೂಚಿಸಿದ್ದಾರೆ.

ಮೇಲ್ನೋಟಕ್ಕೆ ಕಾಣುವಂತೆ ಅಸ್ವಸ್ಥರಾಗಲು ಫುಡ್ ಪಾಯ್ಸನ್ ಕಾರಣವೆಂದು ಈಗಲೇ  ಹೇಳಲು ಕಷ್ಟ, ಫುಡ್ ಪಾಯ್ಸನ್ ಆಗಿದ್ರೆ ಒಂದೇ ದಿನದಲ್ಲಿ ಎಲ್ಲರಲ್ಲೂ ಹರಡುತ್ತದೆ. ಇದೊಂದು ಸಾಂಕ್ರಾಮಿಕ ಸೋಂಕು ಆಗಿರುವ ಸಾಧ್ಯತೆ ಇದೆ,  ವೆನ್ಲಾಕ್ , ಉಜಿರೆ, ಉಪ್ಪಿನಂಗಡಿ  ಬೇರೆ ಬೇರೆ ಆಸ್ಪತ್ರೆಗಳಲ್ಲಿ ದಾಖಲಾದವರ ವಾಂತಿ, ಭೇದಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಿದ ಬಳಿಕ ಪರಿಪೂರ್ಣ ವರದಿಯ ಆಧಾರದಲ್ಲಿ  ಸಾಮೂಹಿಕ ಅಸ್ವಸ್ಥತೆಗೆ ನಿಖರ ಕಾರಣವನ್ನು ತಿಳಿಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್,  ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀಲ್ ಕುಮಾರ್ ಕೆ, ತಾಲೂಕು ಆರೋಗ್ಯ ಕೇಂದ್ರದ ಹಿ.ಆ.ನಿ. ಸೋಮನಾಥ್, ಗ್ರಾ.ಪಂ. ಅಧ್ಯಕ್ಷ ದಿನೇಶ್ ಕಂಡಿಗ , ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರು ಜೊತೆಗಿದ್ದರು.

- Advertisement -
spot_img

Latest News

error: Content is protected !!