Tuesday, May 21, 2024
Homeತಾಜಾ ಸುದ್ದಿಮಂಗಳೂರು: ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವೆಂಕಟೇಶ್ ವರ್ಗಾವಣೆ

ಮಂಗಳೂರು: ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವೆಂಕಟೇಶ್ ವರ್ಗಾವಣೆ

spot_img
- Advertisement -
- Advertisement -

ಬೆಂಗಳೂರು: ಮಂಗಳೂರಿನಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿದ್ದ ಜಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವೆಂಕಟೇಶ್ ಅವರನ್ನು ಸಿಬ್ಬಂದಿ ‌ಮತ್ತು‌ ಆಡಳಿತ ಸುಧಾರಣಾ ಇಲಾಖೆ(ಕಾರ್ಯಕಾರಿ) ಉಪ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಸರ್ಕಾರದ ಉಪ ಕಾರ್ಯದರ್ಶಿಯಾಗಿರುವ ವೆಂಕಟೇಶ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಣೆಯಲ್ಲಿದ್ದರು.

ಇದೀಗ ಸಿಬ್ಬಂದಿ ಮತ್ತು‌ ಆಡಳಿತ ಸುಧಾರಣಾ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿದ್ದ ಜಿ. ಶಶಿಧರ್ ಅವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರದ ಸಚಿವಾಲಯದ ಸೇವೆಗೆ ಸೇರಿದ ಸರ್ಕಾರದ ಜಂಟಿ/ ಉಪ ಕಾರ್ಯದರ್ಶಿ ವೃಂದದ ಮೂವರು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ನಿನ್ನೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

- Advertisement -
spot_img

Latest News

error: Content is protected !!