ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ.ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ.
ಪ್ರಸ್ತುತ 1 ನೇ ವರ್ಷದ MBA AJ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ದಿವಿತ್ ದೇವಾಡಿಗ,ಕಳೆದ 5 ವರ್ಷಗಳಿಂದ ಪಕ್ಷದ ಕೆಲಸ ಮತ್ತು ಚುನಾವಣಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಸಕ್ರಿಯವಾಗಿ ಮತ್ತು ವಿದ್ಯಾರ್ಥಿಗಳ ನಡುವೆ ಕೋಮುವಾದವನ್ನು ನಿಲ್ಲಿಸುವುದು ಮುಖ್ಯ ಉದ್ದೇಶವಾಗಿದೆ. ಸಂಘಟನಾ ಕ್ಷೇತ್ರದ ಇವರ ಕಾರ್ಯವೈಖರಿಯನ್ನು ಗುರುತಿಸಿ, ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಂಘಟನೆಯನ್ನು ಬಲಪಡಿಸಲು ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಕೆಲಸ ಮಾಡುತ್ತೇನೆ.
ಪುತ್ತೂರು ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು, ಮಂಗಳೂರು ದಕ್ಷಿಣ ಅಧ್ಯಕ್ಷರಾಗಿ ಕ್ರಿಸ್ಟನ್ ಜೆ. ಮಿನೇಜಸ್, ಮೂಡಬಿದ್ರೆ ಅಧ್ಯಕ್ಷರಾಗಿ ಮನೀಶ್ ರಾಜ್ ಬಿ., ಸುಳ್ಯ ಅಧ್ಯಕ್ಷರಾಗಿ ಧನುಶ್ ಕುಕ್ಕೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.