- Advertisement -
- Advertisement -
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ, ಪೊಲೀಸರು 300ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇಂತಹ ಬಂಧಿತರಲ್ಲಿ ಅನೇಕರು ಅಮಾಯಕರು, ಅವರನ್ನು ಬಿಟ್ಟು ಬಿಡುವಂತೆ ಆರೋಪಿಗಳ ಪೋಷಕರು ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ನಡೆದಂತ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ 300ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರು ಬಂಧಿಸಿರುವ ಆರೋಪಿಗಳು ಅಮಾಯಕರು, ಅವರನ್ನು ಬಿಟ್ಟು ಬಿಡುವಂತೆ ಠಾಣೆಗಳ ಮುಂದೆ ಗೋಳಾಡುತ್ತಾ ಹೈಡ್ರಾಮಾ ನಡೆಸಿದ್ದಾರೆ. ಈ ಮೂಲಕ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದಾರೆ.
- Advertisement -