Thursday, July 4, 2024
Homeಕರಾವಳಿಮಂಗಳೂರುದಕ್ಷಿಣ ಕನ್ನಡದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಕೋಮುವಾದ ಕಾರಣ; ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ...

ದಕ್ಷಿಣ ಕನ್ನಡದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಕೋಮುವಾದ ಕಾರಣ; ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಕ್ಕೆ ಕೋಮುವಾದ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಹೇಳಿಕೆ ನೀಡಿದ ದಿನೇಶ್ ಗುಂಡೂರಾವ್, ನಮ್ಮ ಅಭ್ಯರ್ಥಿ ಪದ್ಮರಾಜ್ ಒಳ್ಳೆಯ ಅಭ್ಯರ್ಥಿಯಾಗಿದ್ದು ಅವರು ಶ್ರಮ ಪಟ್ಟಿದ್ದಾರೆ, ಸೋತರೂ ಈ ಬಾರಿ ಸೋಲಿನ ಅಂತರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ, ನಾವು ಇಲ್ಲಿ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿರಲಿಲ್ಲ ಎಂದಿರುವ ಸಚಿವ ದಿನೇಶ್ ಗುಂಡೂರಾವ್, ಕರಾವಳಿ ಪ್ರದೇಶದಲ್ಲಿ ಪರಿಸ್ಥಿತಿಯ ಅರಿವಿದೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲೂ ನಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿರಲಿಲ್ಲ ಎಂದೂ ಇದೇ ವೇಳೆ ಪ್ರತಿಕ್ರಿಯಿಸಿರುವ ಅವರು, ಗೆಲುವು ಕಷ್ಟ ಎಂದು ಗೊತ್ತಿತ್ತು ಎಂದಿದ್ದಾರೆ.

ಇಂದು ಕೇಂದ್ರದಲ್ಲಿ ಜನ ಮೋದಿಯವರಿಗೆ ಪಾಠ ಕಲಿಸಿದ್ದು, ಅವರು ಸರ್ವಾಧಿಕಾರಿಯ ರೀತಿಯಲ್ಲಿ ಹೋಗುತ್ತೇವೆ ಅಂದಿದ್ದಕ್ಕೆ ಕಡಿವಾಣ ಬಿದ್ದಿದೆ ಎಂದೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!