- Advertisement -
- Advertisement -
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ಸೋಮವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇಂದು ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿಯೇ ಐಶ್ವರ್ಯಾ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಎಂಸ್ ಕೃಷ್ಣ ಹಾಗೂ ಅವರ ಕುಟುಂಬ ಆಗಮಿಸಿತ್ತು.
ಮೂರು ದಿನಗಳ ಹಿಂದೆಯಷ್ಟೇ ಎಸ್ಎಂ ಕೃಷ್ಣ ನಿವಾಸಕ್ಕೆ ಡಿಕೆಶಿ ಕುಟುಂಬ ಭೇಟಿ ನೀಡಿತ್ತು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ ಸರಳ ಕಾರ್ಯಕ್ರಮದಲ್ಲಿ ಹಾರವನ್ನು ಬದಲಿಸುವ ಮೂಲಕ ನಡೆದಿದೆ.
- Advertisement -