Wednesday, May 22, 2024
Homeತಾಜಾ ಸುದ್ದಿಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗಲ್ಲ ಎಂದು ಸ್ಪಷ್ಟಪಡಿಸಿದ ಡಿ ಕೆ ಶಿವಕುಮಾರ್

ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗಲ್ಲ ಎಂದು ಸ್ಪಷ್ಟಪಡಿಸಿದ ಡಿ ಕೆ ಶಿವಕುಮಾರ್

spot_img
- Advertisement -
- Advertisement -

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವ ಕುಮಾರ್ ‘ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವುದಿಲ್ಲ. ಬೇರೊಂದು ದಿನ ಹಾಜರಾಗಲು ಅವಕಾಶ ಕೋರಿ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಕಾರಣಾಂತರಗಳಿಂದ ಅಕ್ಟೋಬರ್ 7 ರಂದು ವಿಚಾರಣೆಗೆ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಿಲ್ಲ ಎಂದಿದ್ದಾರೆ.

ಇನ್ನು ಡಿ.ಕೆ. ಶಿವಕುಮಾರ್ ಅವರೇ ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದರು.

- Advertisement -
spot_img

Latest News

error: Content is protected !!