- Advertisement -
- Advertisement -
ಬೆಂಗಳೂರು: ಸಾವಿರಾರು ಜನರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಸಿಗೋದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ.
ಇಂದು ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ನಂತರ ಎಲ್ಲರಿಗೂ ಸೇರಿ ಅಧಿಕಾರ ಸಿಗುತ್ತೆ. ಇದು ಬಹಳ ಮುಖ್ಯ ಯಾರ ಶಕ್ತಿ ಏನೇನಿದೆ ಎಂದು ಈಗಲೇ ಹೇಳಲು ಆಗುವುದಿಲ್ಲ. ಎಲ್ಲರಿಗೂ ಶಕ್ತಿ ಇರುತ್ತೆ ನಾವು ಕೆಲ ಮಾರ್ಗದರ್ಶನಗಳನ್ನು ಆಕಾಂಕ್ಷಿಗಳಿಗೆ ನೀಡುತ್ತೇವೆ. ಆದೇ ರೀತಿ ಅವರು ಕೆಲಸ ಮಾಡಿಕೊಂಡು ಹೋಗಬೇಕು ಎಂದರು.
- Advertisement -