- Advertisement -
- Advertisement -
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ. ಇಂದು ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆ ರಾಜ್ಯದ ಬೇರೆ ಬೇರೆ ಕಡೆ ಅಭಿಮಾನಿಗಳು ಅಪ್ಪು ಅವರನ್ನು ಬೇರೆ ಬೇರೆ ರೀತಿಯಲ್ಲಿ ಸ್ಮರಿಸಿಕೊಂಡಿದ್ದಾರೆ.
ಇನ್ನು ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಜನಸಾಗರವೇ ಹರಿದು ಬಂದಿದ್ದು, ಇಂದು ಒಂದೇ ದಿನ 1 ಲಕ್ಷದ 30 ಸಾವಿರ ಮಂದಿ ಅಭಿಮಾನಿಗಳು ಪುನೀತ್ ಸಮಾಧಿ ದರ್ಶನ ಮಾಡಿದ್ದಾರೆ. ಇನ್ನೂ, ಕೂಡ ಪುನೀತ್ ಸಮಾಧಿ ದರ್ಶನಕ್ಕೆ ಜನರು ಬರುವುದನ್ನು ನಿಲ್ಲಿಸಿಲ್ಲ. ಇನ್ನೂ ಸರತಿ ಸಾಲಿನಲ್ಲಿ ಬಂದು ಪುನೀತ್ ಸಮಾಧಿ ದರ್ಶನ ಪಡೆಯುತ್ತಲೇ ಇದ್ದಾರೆ. ಡಿಸಿಪಿ ವಿನಾಯಕ್ ಪಾಟೀಲ್ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿ ಅಲ್ಲಿನ ಭದ್ರತೆ ಪರಿಶೀಲಿಸಿದ್ದಾರೆ.
- Advertisement -