- Advertisement -
- Advertisement -
ಮಂಗಳೂರು: ಬ್ಯಾಂಕ್ ಆಫ್ ಬರೋಡದ 117ನೇ ವರುಷದ ಸ್ಥಾಪಕರ ದಿನಾಚರಣೆಯ ಅಂಗವಾಗಿ ಬ್ಯಾಂಕ್ ಆಫ್ ಬರೋಡ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯದ ಶಾಖೆಯ ವತಿಯಿದ ಕುಡುಂಬೂರು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರು, ವಾಸುಕೀ ನಾಗದೇವರು ಜಾರಂದಾಯ ಪರಿವಾರ ದೈವಗಳ ಕ್ಷೇತ್ರಕ್ಕೆ ಕುಡಿಯುವ ನೀರು ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡದ ಹಿರಿಯ ಶಾಖಾ ವ್ಯವಸ್ಥಾಪಕರಾದ ತರುಣ್ ಆರ್ ಶೇಟ್ ಹಾಗೂ ಸಿಬ್ಬಂದಿ ವರ್ಗ ಮತ್ತು ಕುಡುಂಬೂರು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸೇವ ಟ್ರಸ್ಟ್ ನ ಟ್ರಸ್ಟಿಗಳು, ಕುಡುಂಬೂರು ನಡುಗಿರಿ ಜಾರಂದಾಯ ಸಪರಿವಾರ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು,ಬೈಕಂಪಾಡಿಯ ಕೈಗಾರಿಕ ಉದ್ಯಮಿಗಳು ಮತ್ತು ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.
- Advertisement -