Friday, June 27, 2025
HomeUncategorizedಮಂಗಳೂರು: ಹಿರಿಯ ಪತ್ರಕರ್ತೆ ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ನಿಧನ

ಮಂಗಳೂರು: ಹಿರಿಯ ಪತ್ರಕರ್ತೆ ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ನಿಧನ

spot_img
- Advertisement -
- Advertisement -

ಮಂಗಳೂರು, ಮೇ 12: ಕಳೆದ 19 ವರ್ಷಗಳಿಂದ ವಿಜಯ ‌ಕರ್ನಾಟಕ ಮಂಗಳೂರು ಕಚೇರಿಯಲ್ಲಿ ವರದಿಗಾರ್ತಿಯಾಗಿ, ಹಿರಿಯ ಉಪಸಂಪಾದಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ (44) ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದೊಂದು ವರ್ಷದಿಂದ ಕಾಡಿದ ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹಿರಿಯ ಸಾಹಿತಿ ವಿ.ಗ. ನಾಯಕ ಅವರ ಪುತ್ರಿಯಾಗಿರುವ ಸೀತಾಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ತಂದೆ, ತಾಯಿ ಜತೆ ಮಂಗಳೂರಿನ ಕೊಟ್ಟಾರ ಚೌಕಿಯ ಬಳಿ ವಾಸವಾಗಿದ್ದರು.

ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಪರಿಚಯ:
ಇವರ ಕುಟುಂಬ ಮೂಲತ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಕೋಡಿಯವರು. ಇವರ ತಂದೆ ಶಿಕ್ಷಕ ವೃತ್ತಿ ಸೇರಿದ ಬಳಿಕ ದ.ಕ.‌ಜಿಲ್ಲೆಯ ಅಡ್ಯನಡ್ಕಕ್ಕೆ ಬಂದು ನೆಲೆಸಿದ್ದರು. ಅಡ್ಯನಡ್ಕ ಬಳಿಯ ಕೇಪು ಕಲ್ಲಂಗಳದ ಸೀತಾಲಕ್ಷ್ಮಿ ಅಡ್ಯನಡ್ಕದಲ್ಲೇ ಪ್ರಾಥಮಿಕ ಶಿಕ್ಷಣ ಪಡೆದರು.

ಬಳಿಕ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಡಿಗ್ರಿ ಪಡೆದರು. ನಂತರ ಕನ್ನಡದಲ್ಲಿ ಎಂ ಎ ಮಾಡಿದರು. ಬಳಿಕ ಡಾಕ್ಟರೇಟ್ ಪದವಿ ಪಡೆದರು. ಪ್ರತಿಭಾನ್ವಿತೆಯಾಗಿದ್ದ ಸೀತಾಲಕ್ಷ್ಮಿ ಕನ್ನಡ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದರು.

 ‘ಮಾಸ್ತಿಯವರ ಕತೆಗಳಲ್ಲಿ ಸ್ತ್ರೀ ಪ್ರತಿನಿಧೀಕರಣ’ ಎಂಬ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಹಾಗೂ ಕನ್ನಡ ಪತ್ರಿಕೋದ್ಯಮದಲ್ಲಿ ಸ್ತ್ರೀ ಪರತೆ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಮುಂಬಯಿ ವಿವಿ ಪಿಎಚ್‌ಡಿ ಪದವಿ ಪ್ರದಾನಿಸಿ ಗೌರವಿಸಿದೆ. ಸಾಹಿತ್ಯ ಲೋಕಕ್ಕೆ ತನ್ನದೇ ಆದ ಸೇವೆ ನೀಡಿದ ಸೀತಾಲಕ್ಷ್ಮೀ ಅವರು ಪರಾಮರ್ಶೆ, ಮುಕ್ತಮಾತು, ಆ ಕ್ಷಣದಲ್ಲಿ, ರಂಗಕರ್ಮಿ ಸದಾನಂದ ಸುವರ್ಣ ಸಂಪದ, ರಂಗಚೇತನ ಸದಾನಂದ ಸುವರ್ಣ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ವಿ. ಅರ್ತಿಕಜೆ ಮುಂತಾದ ಹತ್ತಾರು ಕೃತಿಗಳನ್ನು ರಚಿಸಿದ್ದು, ಅವರಿಗೆ ಬನ್ನಂಜೆ ರಾಮಾಚಾರ್ಯ ಪ್ರಶಸ್ತಿ, ಜೆಡಿಎ ಪ್ರಶಸ್ತಿ ಲಭಿಸಿದೆ.

ಅವಳಿ ಸ್ನಾತಕೋತ್ತರ ಪದವಿಗಳು, ಅವಳಿ ಪಿಎಚ್ ಡಿ ಮಹಾಪ್ರಬಂಧಗಳು, ಬೃಹತ್ ಎಂ.ಫಿಲ್ ಗ್ರಂಥಗಳ ಜತೆಗೆ 15ಕ್ಕೂ ಅಧಿಕ ಕೃತಿಗಳನ್ನು ರಚಿಸಿದ ಸೀತಾಲಕ್ಷ್ಮಿ ಭಾಷೆ, ರಂಗಭೂಮಿ, ಕಲೆ ಮತ್ತು ಸಂಸ್ಕೃತಿ ವಿಚಾರದಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದರು.

ಯಾವುದೇ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುತ್ತಿದ್ದರು. ಸಾಹಿತ್ಯ ಸಮ್ಮೇಳನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಆರೋಗ್ಯ, ಕನ್ನಡ ಸಾಹಿತ್ಯ, ನುಡಿಸಿರಿ… ಹೀಗೆ ಯಾವುದೇ ಕಾರ್ಯಕ್ರಮ ಬಂದರೂ ಮೊದಲು ಎದ್ದು ಕಾಣುತ್ತಿದ್ದ ಹೆಸರು ಅವರದು.

.

- Advertisement -
spot_img

Latest News

error: Content is protected !!