- Advertisement -
- Advertisement -
ಕೋಲ್ಕತ: ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಲಘು ಹೃದಯಾಘಾತದ ಬಳಿಕ ಈಗಾಗಲೆ ಆಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಇವರ ಚಿಕಿತ್ಸೆಯ ತಂಡವನ್ನು ಕರ್ನಾಟಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸೆ ತಜ್ಞ ಡಾ. ದೇವಿ ಶೆಟ್ಟಿ ಅವರು ಸೇರಿದ್ದಾರೆ.ಮುಂದಿನ ಚಿಕಿತ್ಸೆಯ ಬಗ್ಗೆ ಅವರು ವೈದ್ಯರ ತಂಡದೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಒಟ್ಟು 9 ವೈದ್ಯರ ತಂಡವನ್ನು ಕೋಲ್ಕತದ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಗಂಗೂಲಿಗೆ ಚಿಕಿತ್ಸೆ ನೀಡುತ್ತಿರುದ್ದು ಕನ್ನಡಿಗ ಡಾ. ದೇವಿ ಶೆಟ್ಟಿ ಜತೆಗೆ ಮತ್ತೋರ್ವ ಹೃದಯ ತಜ್ಞ ಡಾ. ಆರ್ಕೆ ಪಾಂಡ ಕೂಡ ವರ್ಚುವಲ್ ಮೂಲಕ ಪಾಲ್ಗೊಂಡಿದ್ದಾರೆ. ವಿದೇಶದ ವೈದ್ಯರ ಸಹಕಾರವನ್ನು ಕೋರಲಾಗುತ್ತಿದ್ದು ಚಿಕಿತ್ಸೆ ಮುಂದುವರಿಯಿಡಿದೆ.
- Advertisement -