- Advertisement -
- Advertisement -
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ವೀರೇಂದ್ರ ಹೆಗ್ಗಡೆ ಆರೋಗ್ಯ ವಿಚಾರಿಸಿದರು.
ಈ ವೇಳೆ ಹಾರ ಹಾಕಿ, ಶಾಲು ಹೊದಿಸಿ ಡಾ. ವೀರೇಂದ್ರ ಹೆಗ್ಗಡೆಯವರು ದೇವೇಗೌಡರು ಗೌರವಿಸಿದರು. ಈ ವೇಳೆ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರ ಕುಮಾರ್ ಕೂಡಾ ಉಪಸ್ಥಿತರಿದ್ದರು.
- Advertisement -