Sunday, May 5, 2024
Homeತಾಜಾ ಸುದ್ದಿಮುಸ್ಲಿಮರ ವ್ಯಾಪಾರ ನಿರ್ಬಂಧದ ಮಧ್ಯೆ ದೈವಗಳಿಂದಲೇ ಮುಸಲ್ಮಾನರ ವ್ಯಾಪಾರಕ್ಕೆ ಚಾಲನೆ!

ಮುಸ್ಲಿಮರ ವ್ಯಾಪಾರ ನಿರ್ಬಂಧದ ಮಧ್ಯೆ ದೈವಗಳಿಂದಲೇ ಮುಸಲ್ಮಾನರ ವ್ಯಾಪಾರಕ್ಕೆ ಚಾಲನೆ!

spot_img
- Advertisement -
- Advertisement -

ಮಂಗಳೂರು: ಇದು ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗದಲ್ಲಿ ಕನ್ನಡಿಗರೇ ಹೆಚ್ಚಾಗಿ ನೆಲೆಸಿರೋ ಮಂಜೇಶ್ವರದಲ್ಲಿ ನಡೆಯುವ ಸಾಮರಸ್ಯದ ಕಥೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೊಳಪಟ್ಟ ವ್ಯಕ್ತಿಯಿಂದಲೇ ಸಂತೆಯನ್ನು ಸ್ಥಾಪಿಸಿ ಅಲ್ಲಿಂದಲೇ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ ಖರೀದಿಸಿ ಕ್ಷೇತ್ರದ ಉತ್ಸವಕ್ಕೆ ದಿನನಿಶ್ಚಯ ಮಾಡುವ ಮೂಲಕ ಬ್ಯಾರಿ ಸಮುದಾಯದವರ ವ್ಯಾಪಾರಕ್ಕೆ ನಮ್ಮದೇನು ಅಡ್ಡಿಯಿಲ್ಲವೆಂಬುದಾಗಿ ಸಾರುವ ಸಾಮರಸ್ಯದ ಸಾಕ್ಷಿಯಾಗಿದೆ.

ಸುದೀರ್ಘವಾದ ಕೋವಿಡ್ ನ ಬಳಿಕ ವಾಡಿಕೆಯಂತೆ ಈ ವರ್ಷ ಕೂಡಾ  ಉದ್ಯಾವರ ಶ್ರೀ ಅರಸು ಕ್ಷೇತ್ರದ ಜಾತ್ರೆಗೆ ದಿನ ನಿಶ್ಚಯ ನಡೆದಿದೆ. ಸಿಂಹಾಸನ ಕಟ್ಟೆಯ ಒಂದು ಭಾಗದಲ್ಲಿ ಉದ್ಯಾವರ ಸಾವಿರ ಜಮಾಅತ್ ಗೊಳಪಟ್ಟ ಮುಸಲ್ಮಾನರು ಹಾಗೂ ಇನ್ನೊಂದು ಭಾಗದಲ್ಲಿ ಬ್ರಹ್ಮಸಭೆ ಅಂದರೆ ಕ್ಷೇತ್ರಕ್ಕೆ ಸಂಬಂಧಪಟ್ಟವರು ಕುಳಿತುಕೊಂಡು ಬಳಿಕ ದಿನ ಕಟ್ಟೆಯ ಮುಂಭಾಗದಲ್ಲಿ ಪಾತ್ರಿಗಳ ಆಗಮನದೊಂದಿಗೆ ದಿನ ನಿಶ್ಚಯವನ್ನು ಓದಿ ಹೇಳಲಾಯಿತು.

“ಕುದಿಕಳ” ಎಂಬುದಾಗಿ ಕರೆಯಲ್ಪಡುವ ಈ ಕಾರ್ಯಕ್ರಮದಲ್ಲಿ ಉದ್ಯಾವರ ಜಮಾಅತಿಗೊಳಪಟ್ಟ ಅನುವಂಶೀಯ ಕುಟುಂಬಕ್ಕೊಳಪಟ್ಟ ಮುಸಲ್ಮಾನ ಇಲ್ಲಿ ವೀಳ್ಯದೆಲೆ ಹಾಗೂ ತೆಂಗಿನ ಕಾಯಿ ಮಾರಾಟ ನಡೆಸಬೇಕಾಗಿದೆ. ಇದರಂತೆ ಸಯ್ಯದ್ ಎಂಬಾತ ನಡೆಸುತ್ತಿರುವ ವ್ಯಾಪಾರಕ್ಕೆ ಕ್ಷೇತ್ರದ ಅಣ್ಣ ತಮ್ಮ ದೈವಗಳು ಆಗಮಿಸಿ ಸಾಮಾಗ್ರಿ ಖರೀದಿಸಿ ಆಶೀರ್ವಾದವನ್ನು ನೀಡಿದೆ. ಮಾರಾಟವಾದ ನಾಲ್ಕು ತೆಂಗಿನಕಾಯಿಗಳ ಪೈಕಿ  ಎರಡೆರಡನ್ನು ಅಣ್ಣ ದೈವ ಹಾಗೂ ತಮ್ಮ ದೈವ ಖರೀದಿಸಿ ತೆಂಗಿನಕಾಯಿ ಒಡೆಯುವ ಸ್ಪರ್ಧೆ ಏರ್ಪಟ್ಟಿತ್ತು. ಮುಂದಿನ ವಾರದಲ್ಲಿ ದೈವಗಳ ಸಮುದಾಯದವರ ಸಾವಿರ ಜಮಾಅತ್ ಭೇಟಿ ನಡೆಯಲಿದೆ. ಮೇ ತಿಂಗಳ 9 ರಿಂದ 12 ರ ತನಕ ಕ್ಷೇತ್ರದಲ್ಲಿ ಉತ್ಸವ ನಡೆಯಲಿದೆ.

- Advertisement -
spot_img

Latest News

error: Content is protected !!