Friday, May 17, 2024
Homeಕರಾವಳಿಮಂಗಳೂರು: ರಿಕ್ಷಾ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವು...!

ಮಂಗಳೂರು: ರಿಕ್ಷಾ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವು…!

spot_img
- Advertisement -
- Advertisement -

ಮಂಗಳೂರು: ರಿಕ್ಷಾವೊಂದರ ಚಾಲಕ ಚಾಲನೆಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮರ್ಥರನ್ನು ಚೊಕ್ಕಬೆಟ್ಟು ನಿವಾಸಿ ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ.

ಕಲ್ಲಾಪುವಿನಲ್ಲಿರುವ ಗ್ಲೋಬಲ್‌ ಮಾಡುಕಟ್ಟೆಗೆ ತರಕಾರಿ ಖರೀದಿಸಲು ವ್ಯಾಪಾರಿಯೋರ್ವರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಆಟೋ ರಿಕ್ಷಾ ಚಾಲಕ ಹನೀಫ್‌ ಅವರಿಗೆ ಕಣ್ಣು ಮಂಜಾದಂತೆ ಆಗಿದ್ದು, ಈ ಸಂದರ್ಭ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂದರ್ಭ ಸಾರ್ವಜನಿಕರು ಹನೀಫ್‌ ಅವರನ್ನು ಆರೈಕೆ ಮಾಡಿದ್ದಾರೆ. ಬಳಿಕ ಅವರು ರಿಕ್ಷಾ ಚಲಾಯಿಸಿಕೊಂಡು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋಗಿದ್ದಾರೆ. ನೇತ್ರಾವತಿ ಸೇತುವೆ ತಲುಪಿದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಕುರಿತು ಕಂಕನಾಡಿ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!