- Advertisement -
- Advertisement -
ನೆಲ್ಯಾಡಿ: ಇಂದು ಮರವೊಂದು ನಿಂತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದುರಂತ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ನಡೆದಿದೆ.
ನೆಲ್ಯಾಡಿ ಮೂಲಕ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಬೆಳಿಗ್ಗೆ 7.30 ರ ವೇಳೆಗೆ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆದು ಪರಿಶೀಲಿಸುತ್ತಿದ್ದ ವೇಳೆ ರಸ್ತೆ ಬದಿ ಒಣಗಿದ ಧೂಪದ ಮರವೊಂದು ಕಾರು ಹಾಗೂ ಅವರ ಮೇಲೆಯೇ ಬಿದ್ದಿದೆ.
ಈ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನಲ್ಲಿದ್ದ ಮಹಿಳೆ , ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಉಡುಪಿ ಮೂಲದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
- Advertisement -