- Advertisement -
- Advertisement -
ಮಂಗಳೂರು: ವಿಟ್ಲದ ಶ್ರೀಪಂಚಲಿಂಗೇಶ್ವರ ದೇವಸ್ಥಾನ ರಥೋತ್ಸವದ ವೇಳೆ ಡ್ರೋಣ್ ನಿಯಂತ್ರಣ ತಪ್ಪಿ ರಥದಲ್ಲಿ ಏರುವ ಹೊತ್ತಿಗೆ ದೇವರ ಉತ್ಸವ ಮೂರ್ತಿಗೆ ಬಡಿದಿದೆ.
ದೇವರ ಉತ್ಸವ ಮೂರ್ತಿಗೆ ಬಡಿದ ನಂತರ ಅದೇ ಡ್ರೋಣ್ ರಥದ ಮೇಲಿದ್ದ ಸಹಾಯಕ ಅರ್ಚಕರ ತಲೆಗೆ ಬಡಿದು ಬಿದ್ದಿದೆ ಎನ್ನಲಾಗಿದೆ.
ಈ ಘಟನೆಯಿಂದ ಒಮ್ಮೆಗೆ ದೇವರ ಮೂರ್ತಿ ಹೊತ್ತ ಅರ್ಚಕರು ತಬ್ಬಿಬ್ಬಾಗಿದ್ದು, ಅವರು ಸ್ವಲ್ಪ ನಿಯಂತ್ರಣ ತಪ್ಪಿದ್ದರೂ ದೇವರ ಉತ್ಸವ ಮೂರ್ತಿ ಸಹಿತ ಅವರೂ ಕೆಳಕ್ಕೆ ಬೀಳುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ.
ಅದೃಷ್ಟವಶಾತ್ ಉತ್ಸವದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಈ ಅವಘಡದಿಂದ ಕೋಪಗೊಂಡ ಸಹ ಅರ್ಚಕರು ಡ್ರೋಣ್ನ್ನು ಒದ್ದು ಎಸೆದಿದ್ದಾರೆ. ಡ್ರೋಣ್ ಅಪರೇಟರ್ ಹುಚ್ಚಾಟಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
- Advertisement -