- Advertisement -
- Advertisement -
ಬೆಂಗಳೂರು: ರಾಜ್ಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಬರ ಪೀಡಿತ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಬರ ಪರಿಹಾರಕ್ಕಾಗಿ ಹಣ ಬಿಡುಗಡೆಯಾಗಿದೆ.
31 ಜಿಲ್ಲೆಗಳಿಗೆ 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು ಎಸ್ ಡಿಆರ್ ಎಫ್ ಅಡಿಯಲ್ಲಿ ಬರ ಪರಿಹಾರ ಘೋಷಣೆ ಮಾಡಲಾಗಿದೆ.
ಒಟ್ಟು 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 30 ಕೋಟಿ ರೂಪಾಯಿ ಮತ್ತು ಉಡುಪಿ ಜಿಲ್ಲೆಗೆ 45 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
- Advertisement -