Saturday, May 18, 2024
Homeತಾಜಾ ಸುದ್ದಿಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ಆದೇಶ ತಡೆ ಹಿಡಿದ ಸಿಎಂ

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ಆದೇಶ ತಡೆ ಹಿಡಿದ ಸಿಎಂ

spot_img
- Advertisement -
- Advertisement -

ಬೆಂಗಳೂರು: 2021 ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತೀರ್ಮಾನ ತಡೆ ಹಿಡಿದಿದ್ದ ಆರ್ಥಿಕ ಇಲಾಖೆ ನಿರ್ಧಾರವನ್ನು ಹಿಂಪಡೆಯುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಸರ್ಕಾರಿ ನೌಕರರ ಒಕ್ಕೂಟ ಮತ್ತು ಸಚಿವಾಲಯ ನೌಕರರ ಸಂಘ ಈ ಕುರಿತು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿತ್ತು. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಕಾರಣ ನೌಕರರ 15 ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿಯಲಾಗಿತ್ತು. 2021 ರ ವರೆಗೂ ಈ ಆದೇಶವನ್ನು ವಿಸ್ತರಿಸಿದ್ದು, ಸರ್ಕಾರಿ ನೌಕರರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸಿಎಂ ಆದೇಶ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ಅವರ ಈ ಆದೇಶದಿಂದ ಸರ್ಕಾರಿ ನೌಕರರಿಗೆ ವಾರ್ಷಿಕ ಏಳುನೂರು ಕೋಟಿ ರೂ. ವರೆಗೆ ಸಂದಾಯವಾಗಲಿದೆ.

- Advertisement -
spot_img

Latest News

error: Content is protected !!