- Advertisement -
- Advertisement -
ಸುಳ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದಲ್ಲಿ ಇಂದು ಭೂ ಕಂಪನದ ಅನುಭವವಾಗಿದೆ. ಬೆಳಗ್ಗೆ ಸುಮಾರು 9-15 ರ ವೇಳೆಗೆ ಇದ್ದಕ್ಕಿದ್ದಂತೆ ಸುಮಾರು 4-5 ಸೆಕೆಂಡ್ ಗಳ ಭೂಮಿ ಕಂಪಿಸಿದೆ.
ಮಡಿಕೇರಿ ತಾಲೂಕಿನ ಚೆಂಬು ಗ್ರಾಮ, ಸುಳ್ಯ ತಾಲೂಕಿನ ಕಲ್ಲುಗುಂಡಿ, ಗೂನಡ್ಕ, ಕರಿಕೆಯಲ್ಲಿ ಭಾರೀ ಶಬ್ದದೊಂದಿಗೆ 4 ರಿಂದ 5 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದ್ದರಿಂದ ಜನ ಆತಂಕಗೊಂಡಿದ್ದಾರೆ. ಕೆಲವೆಡೆ ಅಡುಗೆ ಕೋಣೆಯಲ್ಲಿದ್ದ ಪಾತ್ರೆಗಳು ಉರುಳಿವೆ.
- Advertisement -