Thursday, June 4, 2026
Homeತಾಜಾ ಸುದ್ದಿಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಬಣ: ತುತ್ತು ಅನ್ನಕ್ಕಾಗಿ ವೇಶ್ಯಾವಾಟಿಕೆಗೆ ಇಳಿದ ಮಹಿಳೆಯರು

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಬಣ: ತುತ್ತು ಅನ್ನಕ್ಕಾಗಿ ವೇಶ್ಯಾವಾಟಿಕೆಗೆ ಇಳಿದ ಮಹಿಳೆಯರು

- Advertisement -
- Advertisement -

ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಜನಸಾಮಾನ್ಯರ ಜೀವನದ ಮೇಲೆ ಅತಿಯಾದ ಪರಿಣಾಮ ಬೀರಿದ್ದು ಎರಡು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಬಗ್ಗೆ ವರದಿಯಾಗಿದೆ.

ಇದರ ಜೊತೆಗೆ ಬಲವಂತದ ಲೈಂಗಿಕತೆಯ ಪರಿಸ್ಥಿತಿಯೂ ನಿರ್ಮಾಣವಾದೆ. ವರದಿಯ ಪ್ರಕಾರ, ಶ್ರೀಲಂಕಾದಲ್ಲಿ ಸುಮಾರು 6 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಜನರು ಈಗ ಆಹಾರವನ್ನು ಉಳಿಸಲು ದಿನಕ್ಕೆ ಒಮ್ಮೆ ಮಾತ್ರ ತಿನ್ನುತ್ತಿದ್ದಾರೆ. ದೇಶದ ಜನಸಂಖ್ಯೆಯ 28 ಪ್ರತಿಶತದಷ್ಟು ಜನರು ತೀವ್ರ ತೊಂದರೆಯಲ್ಲಿದ್ದಾರೆ.

ಮಹಿಳೆಯರು ಆಹಾರಕ್ಕಾಗಿ ಶ್ರೀಮಂತರ ಬಳಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾರೆ. ಇದಲ್ಲದೆ ಅನ್ನಕ್ಕಾಗಿ ಅಂಗಲಾಚುವ ಮಹಿಳೆಯರನ್ನು ಬಲವಂತವಾಗಿ ವೇಶ್ಯವಾಟಿಕೆಗೆ ಬಳಸಲಾಗುತ್ತಿದೆ..ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹಣಕ್ಕಾಗಿ ಮಹಿಳೆಯರು ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡುತ್ತಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!