Thursday, March 28, 2024
Homeಕರಾವಳಿಸುಬ್ರಮಣ್ಯದಲ್ಲಿ ಎರಡು ವರ್ಷಗಳ ಬಳಿಕ ನಡೆಯಿತು ಎಡೆಮಡೆಸ್ನಾನ; ಹರಕೆ ತೀರಿಸಿದ ನೂರಕ್ಕೂ ಹೆಚ್ಚು ಮಂದಿ

ಸುಬ್ರಮಣ್ಯದಲ್ಲಿ ಎರಡು ವರ್ಷಗಳ ಬಳಿಕ ನಡೆಯಿತು ಎಡೆಮಡೆಸ್ನಾನ; ಹರಕೆ ತೀರಿಸಿದ ನೂರಕ್ಕೂ ಹೆಚ್ಚು ಮಂದಿ

spot_img
- Advertisement -
- Advertisement -

ಪುತ್ತೂರು ; ಸುಬ್ರಮಣ್ಯದಲ್ಲಿ ಬರೋಬ್ಬರಿ ಎರಡು ವರ್ಷಗಳ ಬಳಿಕ ಎಡೆಮಡೆಸ್ನಾನ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅನಾದಿ‌ ಕಾಲದಿಂದ ನಡೆದುಕೊಂಡು ಬರುತ್ತಿದ್ದಂತಹ ಮಡೆ ಸ್ನಾನಕ್ಕೆ ನ್ಯಾಯಾಲಯ ನಿಷೇಧ ಹೇರಿದೆ. ಬ್ರಾಹ್ಮಣರು ತಿಂದು ಉಳಿಸಿದಂತಹ ಎಲೆಯ ಮೇಲೆ ಭಕ್ತಾಧಿಗಳು ಈ‌ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಸೇವೆಗೆ ಇತ್ತೀಚಿನ ಕೆಲವು ವರ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.


ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಪದ್ಧತಿಯನ್ನು ನಿಷೇಧಗೊಳಿಸಿ ಆದೇಶ ಹೊರಡಿಸಿದ ಬಳಿಕ ಕ್ಷೇತ್ರದಲ್ಲಿ ದೇವರಿಗೆ ನೈವೇದ್ಯವಿಟ್ಟ ಅನ್ನವನ್ನು ಗೋವುಗಳಿಗೆ ತಿನ್ನಿಸಿದ ಬಳಿಕ ಆ ಎಲೆಯ ಮೇಲೆ ಭಕ್ತಾಧಿಗಳು ಉರುಳು‌ಸೇವೆ ಮಾಡುವ ಎಡೆಮಡೆಸ್ನಾನ ಪದ್ಧತಿಯನ್ನು ಆರಂಭಿಸಲಾಗಿದೆ.

ಕೊರೊನಾ ಮಹಾಮಾರಿ ಹಿನ್ನಲೆ ಕಳೆದ ಎರಡು ವರ್ಷಗಳಿಂದ ಎಡೆಮಡೆಸ್ನಾನ ಆಚರಣೆಯನ್ನು ದೇವಸ್ಥಾನದಲ್ಲಿ ನಿಲ್ಲಿಸಲಾಗಿತ್ತು. ಈ ಬಾರಿ ಮತ್ತೆ ಪ್ರಾರಂಭವಾಗಿದ್ದು. ಇಂದು ಒಟ್ಟು 116 ಭಕ್ತರು ಎಡೆಮಡೆಸ್ನಾನ ನೆರವೇರಿಸಿದ್ದಾರೆ.
ಎಡೆಮಡೆಸ್ನಾನದಲ್ಲಿ ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ. ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತಾಧಿಗಳು ಉರುಳು ಸೇವೆ ಮಾಡುತ್ತಾರೆ. ಚರ್ಮವ್ಯಾಧಿ ಮತ್ತು ಇತರ ರೋಗಗಳಿದ್ದವರು ಈ ಸೇವೆ ನೆರವೇರಿಸಿದರೆ ರೋಗ ಉಪಶಮನವಾಗುತ್ತೆ ಅನ್ನೋ ನಂಬಿಕೆ ಭಕ್ತರಲ್ಲಿ ಇದೆ.

- Advertisement -
spot_img

Latest News

error: Content is protected !!