Sunday, June 29, 2025
Homeಕರಾವಳಿಉಡುಪಿಶಾಲೆಯಲ್ಲಿ ಬಿಜೆಪಿ ಮುಖಂಡನ ಉಸ್ತುವಾರಿಯಲ್ಲೇ ಈದ್ ಮಿಲಾದ್ ಆಚರಣೆ..!!; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್; ಹಿಂದೂ...

ಶಾಲೆಯಲ್ಲಿ ಬಿಜೆಪಿ ಮುಖಂಡನ ಉಸ್ತುವಾರಿಯಲ್ಲೇ ಈದ್ ಮಿಲಾದ್ ಆಚರಣೆ..!!; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್; ಹಿಂದೂ ಸಂಘಟನೆಗಳಿಂದ ಆಕ್ರೋಶ

spot_img
- Advertisement -
- Advertisement -

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಘಟನೆ ನಡೆದ ಶಾಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನೇ ಶಾಲಾ ಸಂಚಾಲಕನಾಗಿದ್ದು, ಆತನ ನೇತೃತ್ವದಲ್ಲೇ ಈ ಕಾರ್ಯಕ್ರಮ ನಡೆದಿರುವುದಲ್ಲದೇ, ಆತ ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಿರುವುದು ಕೂಡ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಹಿಂದೂ ಮಕ್ಕಳನ್ನು ಬಲವಂತವಾಗಿ ಮುಂದುಗಡೆ ಕೂರಿಸಲಾಗಿದೆ ಎಂದು ಪೋಷಕರು ಆಕ್ರೋಶಿತರಾಗಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್, ಇದೊಂದು ಹಿಂದೂ ಮಕ್ಕಳನ್ನು ಬೇರೆ ಧರ್ಮದ ಅನುಯಾಯಿಗಳಾಗುವಂತೆ ಪ್ರೇರೇಪಿಸಿದಂತಾಗುತ್ತದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಹಾಗೂ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಕಾರ್ಯಕ್ರಮ ಆಯೋಜಕರ ಹಾಗೂ ಶಾಲೆಯ ಮೇಲೆ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

- Advertisement -
spot_img

Latest News

error: Content is protected !!