- Advertisement -
- Advertisement -
ಬೆಳ್ತಂಗಡಿ: ಇಲ್ಲಿನ ಎಂಟು ತಿಂಗಳ ಹೆಣ್ಣು ಮಗುವೊಂದು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ ಮೃತಪಟ್ಟ ಮಗುವಾಗಿದೆ.
ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ.ತಾಯಿ ಮಗುವಿನ ಹುಡುಕಾಟದಲ್ಲಿ ತೊಡಗಿದ್ದಾಗ ಮಗು ಮೃತಪಟ್ಟು ಬಕೆಟ್ ನಲ್ಲಿ ಪತ್ತೆಯಾಗಿದೆ.
- Advertisement -