ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಮಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಕರಾವಳಿಯ ಫೈರ್ ಬ್ರಾಂಡ್ ಪತ್ರಕರ್ತ ಎಂದೇ ಖ್ಯಾತಿ ಗಳಿಸಿರುವ ಉಡುಪಿ ಮೂಲದ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಗೆಲುವು ಸಾಧಿಸಿದ್ದಾರೆ. ಹಾಗು ಕಾರ್ಯದರ್ಶಿ ಮೂರು ಸ್ಥಾನಗಳಿಗೆ ಆರು ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಅದರಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ಅವರು ಜಯಗಳಿಸಿದ್ದಾರೆ.
ಈ ಚುನಾವಣೆಗೆ ಜಿಲ್ಲಾ ಘಟಕದ ಮೂರು ಉಪಾಧ್ಯಕ್ಷ ಸ್ಥಾನಕ್ಕೆ ಆರು ಮಂದಿ ಒಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು, ಕಾರ್ಯದರ್ಶಿ ಸ್ಥಾನಕ್ಕೆ ಮೂರು ಸ್ಥಾನಕ್ಕೆ ಆರು ಅಭ್ಯರ್ಥಿಗಳು ಹಾಗೂ ಜಿಲ್ಲಾ ಕಾರ್ಯಕಾರಣಿಯ 15 ಸ್ಥಾನಗಳಿಗೆ 23 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಕುಂದೇಶ್ವರ ಮತ್ತು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮಧ್ಯೆ ನೇರಾ ಹಣಾಹಣಿ ಏರ್ಪಟ್ಟು, ಜಿತೇಂದ್ರ ಕುಂದೇಶ್ವರ ಗೆಲುವಿನ ನಗೆ ಬೀರಿದ್ದಾರೆ.
ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಕಾರ್ಯಕಾರಣಿಗೆ ಜಿಲ್ಲಾ ಪ್ರತಿನಿಧಿಯ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆ ಜೊತೆಗೆ ರಾಜ್ಯದ ಕಾರ್ಯಕಾರಣಿ ಸಮಿತಿ ಉಪಾಧ್ಯಕ್ಷರ ಸ್ಥಾನಕ್ಕೆ ಸಹ ಮತದಾನ ಜರುಗಿತು.